LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Politics News

*ಬಳ್ಳಾರಿಯಲ್ಲಿ ಬಿಜೆಪಿಯ ‘ಚಲೋ ಬಳ್ಳಾರಿ’ ಪಾದಯಾತ್ರೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಭರ್ಜರಿ ಎಲ್ಗಾರ್*

 

ಬಳ್ಳಾರಿ : ಕಾಂಗ್ರೆಸ್ ಸರ್ಕಾರದ कथಿತ ಭ್ರಷ್ಟಾಚಾರ, ಜನವಿರೋಧಿ ನೀತಿಗಳು ಹಾಗೂ ಆಡಳಿತದ ವಿರುದ್ಧ ಬಿಜೆಪಿ ಆರಂಭಿಸಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಕಾರ್ಯಕರ್ತರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೂಡಿತಿನಿಯಿಂದ ಬಳ್ಳಾರಿವರೆಗೆ ನಡೆದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರೊಂದಿಗೆ ಪಕ್ಷದ ಹಲವು ಹಿರಿಯ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಸರ್ಕಾರದ ನೀತಿಗಳ ಬಗ್ಗೆ ಜನರಲ್ಲಿ ಇರುವ ಅಸಮಾಧಾನದ ಧ್ವನಿಯನ್ನು ಈ ಹೋರಾಟದ ಮೂಲಕ ಮತ್ತಷ್ಟು ಬಲಪಡಿಸಲು ಬಿಜೆಪಿ ನಾಯಕರು ಪ್ರಯತ್ನಿಸಿದರು.

ಈ ಪಾದಯಾತ್ರೆಯಲ್ಲಿ ಸಿ.ಟಿ. ರವಿ, ಸಿ.ಸಿ. ಪಾಟೀಲ್, ಎಂ.ಪಿ. ರೇಣುಕಾಚಾರ್ಯ, ಶ್ರೀಕಾಂತ್ ಕುಲಕರ್ಣಿ, ಹರೀಶ್ ಪೂಂಜಾ, ಬಿ. ಶ್ರೀರಾಮುಲು, ಕಿಶೋರ್ ಕುಮಾರ್ ಪುತ್ತೂರು, ಸುಭಾಷ್ ಪಾಟೀಲ್ ಸೇರಿದಂತೆ ಹಲವು ಪ್ರಮುಖ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಜನರ ಪ್ರತಿಕ್ರಿಯೆ ಚರ್ಚೆಗೆ ಕಾರಣ

ಕೂಡಿತಿನಿಯಿಂದ ಬಳ್ಳಾರಿವರೆಗೆ ಸಾಗಿದ ಪಾದಯಾತ್ರೆಗೆ ಮಾರ್ಗಮಧ್ಯೆ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ವಿವಿಧೆಡೆ ಸಾರ್ವಜನಿಕರು ಪಾದಯಾತ್ರೆಯನ್ನು ಸ್ವಾಗತಿಸಿ, ಭಾಗವಹಿಸಿದ್ದ ನಾಯಕರು ಹಾಗೂ ಕಾರ್ಯಕರ್ತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಜನರಿಂದ ದೊರೆತ ಈ ಪ್ರತಿಕ್ರಿಯೆ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದು ಬಿಜೆಪಿ ತಿಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧದ ಜನಾಭಿಪ್ರಾಯವನ್ನು ಮತ್ತಷ್ಟು ವ್ಯಾಪಕಗೊಳಿಸುವ ನಿಟ್ಟಿನಲ್ಲಿ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ನಾಯಕರು ವ್ಯಕ್ತಪಡಿಸಿದರು.

“ಜನರಲ್ಲಿ ಜಾಗೃತಿ ಮೂಡಿಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಹೋರಾಟವನ್ನು ಮುಂದುವರಿಸುತ್ತೇವೆ” ಎಂಬ ಸಂದೇಶವನ್ನು ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ನೀಡಿದರು.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ MDR ಶುಲ್ಕ; ಅಕ್ಟೋಬರ್ 15ರಿಂದ ಹೊಸ ನಿಯಮ**ಖಾನಾಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ; ರೈತರ ಸಂಪೂರ್ಣ ಸಾಲಮನ್ನಾ ಹಾಗೂ ಕೃತಕ ಮಳೆಯ ಬೇಡಿಕೆ ತಹಶೀಲ್ದಾರ್‌ಗೆ ರೈತರ ಮನವಿ; ಬೆಳೆ ನಷ್ಟದ ಪಂಚನಾಮೆ ನಡೆಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯ**ಕಂಗ್ರಾಳಿ ಬಿಕೆಯ ಕಸದ ಬ್ಲ್ಯಾಕ್ ಸ್ಪಾಟ್ ತೆರವು; ಅಮಿತ್ ಸುತಾರ್ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಸ ಹಾಕುವವರಿಗೆ ₹500 ದಂಡ; ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ**ಅಲತಗಾ ಕ್ರಾಸ್ ಬಳಿ ಬೇಕರಿಗೆ ಬೆಂಕಿ; ₹12 ಲಕ್ಷ ನಷ್ಟ, ಮಲಗೌಡ ಪಾಟೀಲ ಭೇಟಿ**ಚವ್ಹಾಟಗಲ್ಲಿಯ ಫ್ರಿಡ್ಜ್ ಸ್ಫೋಟದ ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ*ನಗರ ಪಂಚಾಯಿತಿಯ ನಿರ್ಲಕ್ಷ್ಯ ಆಡಳಿತದ ವಿರುದ್ಧ ವಿವೇಕ ಗಿರಿ ಅವರ ಎಲ್ಗಾರ್; ಸೆಪ್ಟೆಂಬರ್ 16 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ.*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ*