LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

*ಪರ್ಪೆಚುವಲ್ ಲೀಸ್ ಆಸ್ತಿ ನೋಂದಣಿ ಸಮಸ್ಯೆ ಶೀಘ್ರ ಪರಿಹಾರ: ಕ್ರೆಡಾಯ್ ನಿಯೋಗಕ್ಕೆ ಐಜಿಆರ್ ಭರವಸೆ*

ಬೆಳಗಾವಿ: ಪರ್ಪೆಚುವಲ್ ಲೀಸ್ (ಶಾಶ್ವತ ಗುತ್ತಿಗೆ) ಆಸ್ತಿಗಳಿಗೆ ಸಂಬಂಧಿಸಿದಂತೆ ಬಹುಕಾಲದಿಂದ ಬಾಕಿ ಉಳಿದಿರುವ ನೋಂದಣಿ ಹಾಗೂ ವಹಿವಾಟು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ಕರ್ನಾಟಕ ಸರ್ಕಾರದ ನೋಂದಣಿ ಮಹಾನಿರೀಕ್ಷಕರು (IGR) ಮುಲ್ಲೈ ಮುಹಿಲನ್ ನೀಡಿದ್ದಾರೆ.

ಈ ಸಂಬಂಧ ಬೆಳಗಾವಿ ಕ್ರೆಡಾಯ್ ತಂಡವು ಕರ್ನಾಟಕ ಸರ್ಕಾರದ IGR ಮುಲ್ಲೈ ಮುಹಿಲನ್ ಅವರನ್ನು ಭೇಟಿಯಾಗಿ, ಪರ್ಪೆಚುವಲ್ ಲೀಸ್ ಆಸ್ತಿಗಳಿಗೆ ಸಂಬಂಧಿಸಿದಂತೆ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿತು. ಈ ಸಂದರ್ಭದಲ್ಲಿ AIGR (ಕಂಪ್ಯೂಟರ್) ಮಧುಸೂಧನ ಅವರು ಉಪಸ್ಥಿತರಿದ್ದರು.

ಪರ್ಪೆಚುವಲ್ ಲೀಸ್ ಆಸ್ತಿಗಳ ವಹಿವಾಟು ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಯಿಂದಾಗಿ ಆಸ್ತಿ ಮಾಲೀಕರು, ನಿರ್ಮಾಪಕರು ಹಾಗೂ ರಿಯಲ್ ಎಸ್ಟೇಟ್ ಕ್ಷೇತ್ರದವರು ಹಲವು ದಿನಗಳಿಂದ ತೊಂದರೆ ಅನುಭವಿಸುತ್ತಿರುವುದನ್ನು ಕ್ರೆಡಾಯ್ ನಿಯೋಗವು ಐಜಿಆರ್ ಅವರ ಗಮನಕ್ಕೆ ತಂದಿತು.

ಸಮಸ್ಯೆಯ ಕುರಿತು ಈಗಾಗಲೇ ಸಂಪೂರ್ಣ ಅರಿವು ಹೊಂದಿರುವುದಾಗಿ ತಿಳಿಸಿದ IGR ಮುಲ್ಲೈ ಮುಹಿಲನ್, ಅಗತ್ಯ ವಹಿವಾಟುಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಕಾವೇರಿ (CAVERI) ಸಾಫ್ಟ್‌ವೇರ್‌ನಲ್ಲಿ ಹೊಸ ಆಯ್ಕೆಯನ್ನು (ಆಪ್ಷನ್) ಸೇರ್ಪಡೆಗೊಳಿಸಲು ಅಗತ್ಯ ಅನುಮತಿಯನ್ನು ಈಗಾಗಲೇ ಪಡೆಯಲಾಗಿದೆ ಎಂದು ತಿಳಿಸಿದರು.

ಸಾಫ್ಟ್‌ವೇರ್‌ನಲ್ಲಿ ಅಗತ್ಯ ಬದಲಾವಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಭರವಸೆ ನೀಡಿದರು. 
ಇನ್ನು ಕೆಲವೇ ದಿನಗಳಲ್ಲಿ ಈ ಕುರಿತು ಸಕಾರಾತ್ಮಕ ಸುದ್ದಿ ಹೊರಬರುವ ನಿರೀಕ್ಷೆಯಿದೆ ಎಂದು ಕ್ರೆಡಾಯ್ ತಂಡ ತಿಳಿಸಿದೆ.
ಪರ್ಪೆಚುವಲ್ ಲೀಸ್ ಆಸ್ತಿಗಳ ಸಮಸ್ಯೆ ಬಗೆಹರಿದರೆ, ಸಂಬಂಧಿತ ಆಸ್ತಿಗಳ ವಹಿವಾಟು ಮತ್ತು ನೋಂದಣಿ ಪ್ರಕ್ರಿಯೆ ಸುಗಮವಾಗಲಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದವರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ.

 ಹೀಗಾಗಿ ಐಜಿಆರ್ ನೀಡಿರುವ ಭರವಸೆ ಬೆಳಗಾವಿಯ ರಿಯಲ್ ಎಸ್ಟೇಟ್ ವಲಯದಲ್ಲಿ ಆಶಾಭಾವನೆ ಮೂಡಿಸಿದೆ.

ಭೇಟಿಯಲ್ಲಿ ಕ್ರೆಡಾಯ್ ಅಧ್ಯಕ್ಷ ಯುವರಾಜ್ ಹುಲ್ಜಿ, ಪ್ರಶಾಂತ್ ವಾಂಡಕರ್, ಸುಧೀರ್ ಪನಾರೆ, ಅಮರ್ ಅಕ್ನೋಜಿ, ಸಚಿನ್ ಬೈಲವಾಡ್, ಪ್ರಶಾಂತ್ ಪಾಟೀಲ, ವೀರೇಶ್ ಶೆಟ್ಟಣವರ, ರಾಜೇಶ್ ಮಾಳಿ, ರಾಜೇಂದ್ರ ಮುತಗೆಕರ್ ಹಾಗೂ ಡಿ.ಎ. ಸಾಯನೇಕರ ಉಪಸ್ಥಿತರಿದ್ದರು.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ MDR ಶುಲ್ಕ; ಅಕ್ಟೋಬರ್ 15ರಿಂದ ಹೊಸ ನಿಯಮ**ಖಾನಾಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ; ರೈತರ ಸಂಪೂರ್ಣ ಸಾಲಮನ್ನಾ ಹಾಗೂ ಕೃತಕ ಮಳೆಯ ಬೇಡಿಕೆ ತಹಶೀಲ್ದಾರ್‌ಗೆ ರೈತರ ಮನವಿ; ಬೆಳೆ ನಷ್ಟದ ಪಂಚನಾಮೆ ನಡೆಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯ**ಕಂಗ್ರಾಳಿ ಬಿಕೆಯ ಕಸದ ಬ್ಲ್ಯಾಕ್ ಸ್ಪಾಟ್ ತೆರವು; ಅಮಿತ್ ಸುತಾರ್ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಸ ಹಾಕುವವರಿಗೆ ₹500 ದಂಡ; ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ**ಅಲತಗಾ ಕ್ರಾಸ್ ಬಳಿ ಬೇಕರಿಗೆ ಬೆಂಕಿ; ₹12 ಲಕ್ಷ ನಷ್ಟ, ಮಲಗೌಡ ಪಾಟೀಲ ಭೇಟಿ**ಚವ್ಹಾಟಗಲ್ಲಿಯ ಫ್ರಿಡ್ಜ್ ಸ್ಫೋಟದ ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ*ನಗರ ಪಂಚಾಯಿತಿಯ ನಿರ್ಲಕ್ಷ್ಯ ಆಡಳಿತದ ವಿರುದ್ಧ ವಿವೇಕ ಗಿರಿ ಅವರ ಎಲ್ಗಾರ್; ಸೆಪ್ಟೆಂಬರ್ 16 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ.*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ*